Saturday, November 14, 2009

ಮಾಮಕಾಃ ಪಾಂಡವಾಶ್ಚೈವ


ಧರ್ಮಕ್ಷೇತ್ರೇ ಕುರುಕ್ಷೇತ್ರೇ ಸಮವೇತಾ ಯುಯುತ್ಸವಃ

ಮಾಮಕಾಃ ಪಾಂಡವಾಶ್ಚೈವ ಕಿಮ ಕುರ್ವತ ಸಂಜಯ


ಭವದ್ಗೀತೆಯ ಈ ಸಾಲು ಎಲ್ಲರಿಗೂ ಚಿರಪರಿಚಿತ. ಕುರುಕ್ಷೇತ್ರ ಮಹಾಯುದ್ಧದ ಮೂಲ ಕಾರಣ, ಈ ಒಂದು ಸಾಲು ಎತ್ತು ತೋರಿಸುತ್ತದೆ. ಮಹಾರಾಜ ಧೃತರಾಷ್ಟ್ರ, ಸಂಜಯನಿಗೆ ಹೇಳುವ ಮಾತಿದು. ಕುರುಕ್ಷೇತ್ರದ ಯುದ್ಧದಲ್ಲಿ ನಡೆಯುವ ಪ್ರಸಂಗಗಳನ್ನು ವಿವರಿಸುವಂತೆ ಸಂಜಯನಿಗೆ ಹೇಳುತ್ತಾನೆ. ಇಲ್ಲಿ ಕೌರವರನ್ನು "ಮಾಮಕಾಃ" ಎಂಬಲ್ಲಿ "ನನ್ನವರು ಮತ್ತು ಪಾಂಡವರು" ಎಂದು ಒಂದೇ ಮನೆಯಲ್ಲೇ ಇದ್ದು ಬೆಳೆದ ಕೌರವ-ಪಾಂಡವರನ್ನು ಬೇರೆಬೇರೆಯಾಗೇ ಕಾಣುತ್ತಾನೆ. ಮೊನ್ನೆ "ವಂದೇ ಮಾತರಮ್" ಹಾಡಿಗೆ ಫತ್ವಾ ಹೊರಡಿಸಲಾಗಿದೆ. ಕಾರಣ, ಮುಸಲ್ಮಾನರು ಬೇರೆ ಯಾರನ್ನೂ ಪೂಜಿಸಬಾರದೆಂದು. ಇವರಿಗೂ ಅಂಧ ಧೃತರಾಷ್ಟ್ರನಿಗೂ ಇರುವ ವ್ಯತ್ಯಾಸ ಇಷ್ಟೇ, ಆ ಅಂಧರಾಜ ರಾಷ್ಟ್ರದ ಹಿತದ ಬಗ್ಗೆ ಯೋಚಿಸದೆ, ತನ್ನ ಮಕ್ಕಳ ಅಧಿಕಾರದ ಸ್ವಾರ್ಥ ಮನೋಭಾವವನ್ನೇ ಬೆಳೆಸಿಕೊಂಡು ಬಂದ. ಇವತ್ತು ಒಂದು ಮತದ ಸ್ವಾರ್ಥಕ್ಕೆ ರಾಷ್ಟ್ರವನ್ನು ಪೂಜಿಸುವ ಗೀತೆಯನ್ನು ತಡೆದು ನಿಲ್ಲಿಸುವ ಪ್ರಯತ್ನ.


ಕುರುಕ್ಷೇತ್ರ ಯುದ್ದದ ಪ್ರಾರಂಭದಲ್ಲಿ ಅರ್ಜುನ ತನ್ನ ಶಸ್ತ್ರಾಸ್ತ್ರಗಳನ್ನು ಕಳಚಿ, ಕೆಳಗಿಟ್ಟು ತಾನು ಯುದ್ಧ ಮಾಡುವುದಿಲ್ಲವೆಂದು ಹೇಳುತ್ತಾನೆ. ಕಾರಣ, ತನ್ನ ಶತ್ರುಸೈನ್ಯದಲ್ಲಿ ಅವನಿಗೆ ಎಲ್ಲರೂ ತನ್ನವರೇ ಕಾಣಿಸುತ್ತಾರೆ (ಸ್ವಜನೇ ಶತೃಸೈನ್ಯೆ). ಕೌರವರಿಗೂ ಪಾಂಡವರಿಗೂ ಇದ್ದ ವ್ಯತ್ಯಾಸ ಈ ಮನೋಭಾವವೇ. ಆದರೆ ತನ್ನವರು ಎಂಬ ಮಮಕಾರಕ್ಕಿಂತ, ರಾಷ್ಟ್ರದ ಹಿತ ಮುಖ್ಯ, ಧರ್ಮವನ್ನು ಕಾಪಾಡುವುದಕ್ಕೆ ಹೆಚ್ಚು ಪ್ರಾಧಾನ್ಯತೆ ಕೊಡಬೇಕೆಂದು ಶ್ರೀ ಕೃಷ್ಣ ನಮಗೆಲ್ಲರಿಗೂ ಗೀತೆಯ ಮೂಲಕ ಸಂದೇಶವನ್ನು ಕೊಟ್ಟಿದ್ದಾನೆ. ಭಗವದ್ಗೀತೆಯ ಪೂರ್ಣ ಸಾರವನ್ನು ತಿಳಿಯಬೇಕಾದರೆ, ಶ್ರೀ ಕೃಷ್ಣನ ಜೀವನ ಚರಿತ್ರೆಯನ್ನು ತಿಳಿಯಬೇಕು.


ವಂದೇ ಮಾತರಮ್ ವಿರುದ್ಧ ಮಾತುಗಳು ಕೇಳುತ್ತಿರುವುದು ಇದೇನು ಮೊದಲನೆಯ ಸಲವಲ್ಲ. ಆದರೆ ಎಷ್ಟು ಸಲ ಇದರ ಬಗ್ಗೆ ಮಾತಾದರೂ, ಇದರ ಬಗ್ಗೆ ಹೆಚ್ಚು ಜನ ಕಾಳಜಿಯನ್ನೇ ತೋರಿಸುವುದಿಲ್ಲ. ಅದು ತಪ್ಪಲ್ಲ. ಕೆಟ್ಟದ್ದನ್ನು ಇಗ್ನೋರ್ ಮಾಡುವುದು ಒಂದು ರೀತಿಯಲ್ಲಿ ಒಳ್ಳೆಯದು. ಇತಿಹಾಸವು ನಮಗೆ ತೋರಿಸುವ ಘೋರಾತಿಘೋರ ವನ್ನಿವೇಷಗಳನ್ನು ನಾವು ಎಷ್ಟು ಬೇಗ ಮರೆತುಬಿಡುತ್ತೇವೆ ಅಲ್ಲವೇ? ಎಲ್ಲವನ್ನೂ ಮರೆತರೆ ಇತಿಹಾಸ ಓದುವುದಾದರೂ ಯಾಕೆ?


ರಮಾಯಣದಲ್ಲಿ ಕೈಕೇಯಿ-ಮಂತರರ ಪಿತೂರಿಯಿಂದ ರಾಮ ಕಾಡಿಗೆ ಹೋಗಬೇಕಾಯಿತು. ಕೈಕೇಯ ರಾಜ್ಯ ಈಗಿನ ಅಫ್ಗಾನಿಸ್ಥಾನ್-ರಶ್ಶ್ಯಾ ಬಾರ್ಡರ್. ಅವರು ಭಾರತಕ್ಕೆ ಬಂದಿದ್ದು ಈಗ ಭಯೋತ್ಪಾದಕರು ಬರುತ್ತಿರುವ ದಾರಿಯಲ್ಲೇ. ಮಹಭಾರತದಲ್ಲಿ, ಗಾಂಧಾರಿ-ಶಕುನಿಯರು ಕೂಡ ಬಂದಿದ್ದು ಅದೇ ದಾರಿಯಲ್ಲೇ. ಈಗಲೂ ನಾವು ಈ ದಾರಿಯನ್ನು ಮುಕ್ತವಾಗಿ ಓಡಾದಲು ಬಿಡುತ್ತಿದ್ದೇವೆ. ಭಾರತೀಯರು ಎಷ್ಟು ಕರುಣಾಮಯಿಗಳು. ಎಲ್ಲರಿಗೂ "ಬನ್ನಿ ಬನ್ನಿ, ನಮ್ಮನ್ನು ದೋಚಿ, ನೀವು ಸುಖವಾಗಿರಿ" ಎಂದು ಸಾರಿ ಸಾರಿ ಹೇಳುತ್ತಿದ್ದಾರೆ. ಇಂತಹವರನ್ನು ತನ್ನ ಭೂಮಿಯಲ್ಲಿ ಹೆತ್ತಿದ್ದಕ್ಕೆ ಭಾರತ ಮಾತೆ ಎಷ್ಟು ಸಂತೋಶ ಪಡುತ್ತಿದ್ದಾಳೋ.


ದ್ವಾಪರಯುಗದಲ್ಲಿ ಶ್ರೀ ಕೃಷ್ಣ, ಸಮುದ್ರದ ನೆಲದಲ್ಲೇ ದ್ವಾರಕೆಯೆಂಬ ನಗರವನ್ನು ನಿರ್ಮಾಣ ಮಾಡಿದ. ಸಮುದ್ರದಿಂದ ಬರುವ ಅಪಾಯಗಳಿಂದ ರಾಷ್ಟ್ರವನ್ನು ಕಾಪಾಡಬೇಕೆಂಬ ಹಿತದೃಷ್ಟಿಯಲಿ. ನಂತರ ಏನಾಯಿತು ನೋಡಿ. ಮಹಮ್ಮದ್ ಘಝ್ನಿ ಸಮುದ್ರಿಂದ ದಾಳಿ ನಡೆಸಿ ಸೊಮನಾಥ ದೇವಾಲಯವನ್ನು ಮಟ್ಟ ಹಾಕಿದ ಎಂದು ಕೇಳ್ಪಟ್ಟೆ. ಇತ್ತೀಚೆಗೆ ನಡೆದ ಮುಂಬೈ ದಾಳಿಯಲ್ಲಿ ಕೂಡ ಭಯೋದ್ಪಾದಕರು ಸಮುದ್ರದಿಂದ ಬಂದಿಳಿದಿದ್ದರು. ಆದರೆ ನಾವು ಭಾರತೀಯರು ತೆರೆದ ಹೃದಯದಿಂದ ಎಲ್ಲರನ್ನೂ ಒಪ್ಪಿಕೊಳ್ಳಬೇಕಲ್ಲವೇ? ಅದಕ್ಕೇ ಹೊಸ ಭದ್ರಕೋಟೆಗಳನ್ನು ಕಟ್ಟುವುದಿಲ್ಲ. ಬೇರೆಯವರು ನಮ್ಮ ಮೇಲೆ ಎಷ್ಟು ಕೈ ಮಾಡಿದರೂ ನಾವು ಅಂತಹ ದುಃಸಾಹಸಕ್ಕೆ ಕೈ ಹಾಕುವುದಿಲ್ಲ. ಸುಭಾಶ್ ಚಂದ್ರ ಬೋಸ್ ಅವರ "ಇಂಡಿಯನ್ ನಾಶನಲ್ ಆರ್ಮಿ" ಇಂದ ನಮಗೆ ಸ್ವಾತಂತ್ರ್ಯ ಬಂದಿದ್ದು ನಿಜವಾದರೂ, ನಾವು ಅದನ್ನು ಒಪ್ಪುವುದಿಲ್ಲ. ಯಾಕೆಂದರೆ ನಾವು ಅಹಿಂಸಾವಾದಿಗಳಲವೇ?


ಅರ್ಜುನ, ಚಂದ್ರಗುಪ್ತರು ನಮಗೆ ಸಿಗಬಹುದೇನೋ. ಆದರೆ ಅವರ ಸಾರಥಿಯಾಗಿ ಒಬ್ಬ ಶ್ರೀ ಕೃಷ್ಣ, ಚಾಣಕ್ಯ ಅಥವಾ ವಿವೇಕಾನಂದ ಬರಬಾರದೇ?