
ಹಸು ಮನೆಯಲ್ಲಿದ್ದರೆ ಮನೆಗೆ ಒಳ್ಳೆಯದು ಎಂಬ ಭಾವನೆ ಇದೆ. ಹಸುವಿನ ಪ್ರಯೋಜನ ಎಲ್ಲರಿಗೂ ತಿಳಿದ ವಿಷಯವೇ. ಪಾಕೆಟ್ ಹಾಲಿಗಿಂತ ಹಸುವಿನ ಹಾಲು ಬೆಳೆಯುವ ಮಕ್ಕಳಿಗೆ ಹೆಚ್ಚು ಪುಷ್ಟಿದಾಯಕ ಎಂದು ವಿಜ್ಙಾನವೇ ಹೇಳುತ್ತದೆ. ಅದರ ಮೂತ್ರ, ಸಗಣಿಯಿಂದ ನಿರೋಧಶಕ್ತಿ ಹೆಚ್ಚುತ್ತದೆ. ಮನೆಯಲ್ಲಿ ಹಸುವೊಂದಿದ್ದರೆ ಎಚ್೧ಎನ್೧ ಗೆ ಹೆದರಬೇಕಾಗಿಲ್ಲ ಅಲ್ಲವೇ?
ಈಗ ಯಾಕಪ್ಪ ಇದರ ಬಗ್ಗೆ, ಅದೂ ಬೆಂಗಲೂರಿನಲ್ಲಿ ಅಂತ ಯೋಚನೆ ಮಾಡ್ತಿದಿರಾ? ಭಾರತೀಯ ಹಸುವಿನ ೧೦೦ಕ್ಕೂ ಹೆಚ್ಚು ತಳಿಗಳಲ್ಲಿ ಕೇವಲ ೩೩ ತಳಿಗಲು ಇನ್ನು ನಶಿಸದೇ ಉಳಿದುಕೊಂಡಿದೆ. ಇದರ ಬಗ್ಗೆ ನಾವು ಏನು ಮಾಡುತ್ತಿದ್ದೀವಿ?
ನಮ್ಮ ಇತಿಹಾಸದಲ್ಲಿ ನಾವು ನೋಡುತ್ತೇವೆ, ಹಸುಗಳು ಆಧಾರವಾಗಿದ್ದ ರಾಜ್ಯಗಳು ಬೆಳವಣಿಗೆಯ ಹಾದಿಯಲ್ಲಿ ಸಾಗಿತು. ಆದರೆ ಇತಿಹಾಸದಿಂದ ನಾವು ಯಾವ ಪಾಠವನ್ನೂ ಕಲಿಯುತ್ತಿಲ್ಲ. ನಮ್ಮ ಪ್ರಧಾನ ಉದ್ಯಮ ಕೃಶಿ ಎಂದು ಹೇಳಿಕೊಂಡರೂ, ನಾವು ಪಾಶ್ಚಾತ್ಯದ ಹಾದಿನನ್ನು ಅನುಸರಿಸುತ್ತಿದ್ದೇವೆ. ಹಳ್ಳಿಗಳಿಂದ ರೈತರು ತಮ್ಮ ಬೇಸಾಯವನ್ನು ಬಿಟ್ಟು ಪಟ್ಟಣದ ಕಡೆ ಮುಖ ಮಾಡಿದ್ದಾರೆ. ಅವರನ್ನು ದೂಶಿಸುವುದು ಉಚಿತವಲ್ಲ. ಪಟ್ಟಣಗಳಲ್ಲಿರುವವರು ಲಕ್ಷಗಟ್ಟಲೆ ಸಂಪಾದಿಸಬೇಕಾದರೆ ರೈತರು ಮಾತ್ರ ಹಳ್ಳಿಗಳಲ್ಲೇ ಉಳಿಯಬೇಕು ಎಂದು ನಾವು ಯಾಕೆ ನಿರೀಕ್ಷಿಸಬೇಕು? ಆದರೆ ಹೀಗಯೇ ಮುಂದುವರೆದರೆ, ನಮ್ಮಲ್ಲಿ ಹಣವಿರಬಹುದೇನೋ ಆದರೆ ಉಣ್ಣಲು ಅನ್ನ ಇರುವುದಿಲ್ಲ. ಹೇಗೆ ಕಳೆದ ೨೦-೨೫ ವರುಷಗಳಿಂದ ಪಟ್ಟಣಗಳಲ್ಲಿ ಐಟಿ ಆಂದೋಲನವಾಯಿತೋ ಹಾಗೆ ಈಗ ಕೃಶಿ ಮತ್ತು ಗೋ ಆಂದೋಲನವಾಗಬೇಕು. ಈಗ ನಾವು ಎಚ್ಚೆತ್ತುಕೊಳ್ಳದಿದ್ದರೆ ಮುಂದಿನ ಪೀಳಿಗೆಯ ಗತಿ ಅದೋಗತಿ. ಗೋವನ್ನು ಕಾಪಾಡುವುದು ಎಲ್ಲರ ಕರ್ತವ್ಯವಲ್ಲವೇ? ಅದು ಬರಿ ರೈತರಿಗೆ ಸಂಬಂದಪಟ್ಟ ವಿಷಯವೇ?
ಸೆಪ್ಟಂಬರ್ ೩೦ನೇ ತಾರೀಕು ಕುರುಕ್ಷೇತ್ರದಲ್ಲಿ "ವಿಷ್ವ ಮಂಗಲ ಗೋ-ಗ್ರಾಮ ಯಾತ್ರೆ" ಪ್ರಾರಂಭವಾಯಿತು. ಯಾತ್ರೆ ೧೦೮ ದಿನ ನಡೆಯಲಿದ್ದು, ಭಾರತದ ಎಲ್ಲಾ ರಾಜ್ಯಗಳಿಂದಲೂ ಸಾಗಿ ನಾಗಪುರದಲ್ಲಿ ಅಂತ್ಯಗೊಳ್ಳಲಿದೆ. ಬೆಂಗಲೂರಿಗೆ ಡಿಸೆಂಬರ್ ೧ನೇ ತಾರೀಕು ಬರುತ್ತದೆ. ಭಾರತದ ಪ್ರತಿಷ್ಠಿತ ಸ್ವಾಮಿ-ಸಂತರು ಸೇರಿ ಮಾಡುತ್ತಿರುವ ಈ ಕಾರ್ಯಕ್ರಮ, ಹೆಚ್ಚು ಜನರನ್ನು ಗೋ ಸಂರಕ್ಷಣೆಯ ಬಗ್ಗೆ ಜಾಗೃತಗೊಳಿಸಲಿದೆ. ಇದರ ಬಗ್ಗೆ ಹೆಚ್ಚಿನ ಮಾಹಿತಿಗೆ http://kan.gougram.org/ ಗೆ ಭೇಟಿನೀಡಿ.
ಇದರಲ್ಲಿ ನಮ್ಮ ಪಾತ್ರವೂ ಇದೆ. ಈ ಯಾತ್ರೆಯ ಫಲ ಹೆಚ್ಚು ಜನರಿಗೆ ಮುಟ್ಟಬೇಕಾಗಿದೆ. ಹೆಚ್ಚೆಚ್ಚು ಜನರು, ರೈತರು, ಕೈಗಾರಿಕೋದ್ಯಮರು, ರಾಜಕಾರಿಣಿಗಳು ಎಲ್ಲರೂ ಇದರಲ್ಲಿ ಪಾಲ್ಗೊಳ್ಳಬೇಕು. ನಮ್ಮ ಸಾಂಸ್ಕೃತಿಕ ಬೆಳವಣಿಗೆಗೆ ಈಗಲೇ ಅಡಿಗಟ್ಟು ಹಾಕಬೇಕಿದೆ. ನೀವೂ ಇದಕ್ಕೆ ಕೈ ಜೋಡಿಸ್ತೀರ ಅಲ್ವಾ?

